Saturday, July 27, 2024
spot_img

ಮಂಡ್ಯ:ನಮ್ಮ ರಾಜ್ಯದ ಪೋಲಿಸರ ಮೇಲೆ ನಂಬಿಕೆ ಇಲ್ಲವೆಂದರೆ ಹೇಗೆ? ಎಚ್ ವಿಶ್ವನಾಥ್ ಪ್ರಶ್ನೆ

ಮಂಡ್ಯ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ತಂಡದಲ್ಲಿ ಕರ್ನಾಟಕ ಪೊಲೀಸರು ಇದ್ದಾರೆ, ನಮ್ಮ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಪ್ರಶ್ನಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ಪ್ರಕರಣ ಕುರಿತು ಸಿಬಿಐ ತನಿಖೆಗೆ ಒತ್ತಡ ಹಾಕುತ್ತಿರುವುದು ಸರಿಯಲ್ಲ, ವಿಶೇಷ ತನಿಖಾ ತಂಡದಿಂದ ನ್ಯಾಯ ಸಿಗಲಿದೆ ಎಂದು ಹೇಳಿದರು.

ಅಶ್ಲೀಲ ವಿಡಿಯೋ ಪ್ರಕರಣ ವಿಚಾರದಲ್ಲಿ
ಎಲ್ಲಾ ರಾಜಕಾರಣಿಗಳು ಸೇರಿ ಕರ್ನಾಟಕ ರಾಜ್ಯದ ಜನತೆಗೆ ಮಸಿ ಬಳಿಯುತ್ತಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಂತರ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಆದರೂ ಕೂಡ ಸುಖ ಸುಮ್ಮನೆ ಎಲ್ಲರೂ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ. ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಸಹ ಕರ್ನಾಟಕದ ಜನತೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಪ್ರಕರಣದ ವಿಚಾರವಾಗಿ ಜಾತಿ ಮತ್ತು ಧರ್ಮ ಎಳೆದು ತರಲಾಗುತ್ತಿದೆ. ಎಲ್ಲರೂ ನಮ್ಮ ಸ್ನೇಹಿತರೆ, ಆದರೆ ಈ ವಿಚಾರದಲ್ಲಿ ತಪ್ಪು ಮಾಡುತ್ತಿದ್ದಾರೆ. ಪ್ರತಿಭಟನೆ, ಪರಸ್ಪರ ಆರೋಪ, ಪ್ರತ್ಯಾರೋಪ ಮೂಲಕ ಕೆಸರೆರೆ ಚಾಟದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!