Saturday, July 27, 2024
spot_img

ಮೈತ್ರಿಯಿಂದ ಜೆಡಿಎಸ್ ವರಿಷ್ಟರು ಸ್ವಾತಂತ್ರ್ಯ ಕಳೆದುಕೊಂಡಿದ್ದಾರೆ:ಚಲುವರಾಯಸ್ವಾಮಿ ಲೇವಡಿ

ಜೆಡಿಎಸ್ ವರಿಷ್ಠರು ಸ್ವಾತಂತ್ರ್ಯ ಕಳೆದುಕೊಂಡಿರುವುದು ವಿಪರ್ಯಾಸ
ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ, ಮಾ.೨೦: ಹಾಸನ ಹಾಗೂ ಮಂಡ್ಯದಲ್ಲೂ ಅಭ್ಯರ್ಥಿ ಘೋಷಣೆ ಮಾಡಲು ಜೆಡಿಎಸ್ ವರಿಷ್ಠರು ಸ್ವಾತಂತ್ರ್ಯ ಕಳೆದುಕೊಂಡಿರುವುದು ವಿಪರ್ಯಾಸ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.
ನಗರದ ಬಂದೀಗೌಡ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಗೃಹ ಕಚೇರಿ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಹೋಗಿ ತಪ್ಪು ಮಾಡಿರುವ ಬಗ್ಗೆ ಜೆಡಿಎಸ್ ವರಿಷ್ಠರಿಗೆ ಈಗ ಅರಿವಾಗಿದೆ ಎಂದರು.
ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪಕ್ಷ ಗೌರವಯುತವಾಗಿ ನಡೆಸಿಕೊಂಡಿದೆ ಎಂದು ಅವರು ಹೇಳಿದರು.
ದೇವೇಗೌಡರ ಸ್ವಂತ ಅಳಿಯ ಡಾ.ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ಪಕ್ಷದ ಚಿಹ್ನೆಯಲ್ಲಿ ಕಣಕ್ಕಿಳಿಸುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿ ಜೆಡಿಎಸ್‌ಗೆ ಬರಬಾರದಿತ್ತು. ಇದರಿಂದ ಅವರ ಆತ್ಮವಿಶ್ವಾಸ ಕುಗ್ಗಿದೆ ಎಂಬುದು ತಿಳಿಯುತ್ತದೆ ಎಂದು ಅವರು ಟೀಕಿಸಿದರು.
ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ನಾಯಕರನ್ನು ಬಿಜೆಪಿ ಕಡೆಗಣಿಸಿದೆ. ಹಾಲಿ ಸಂಸದ, ಹಿರಿಯ ನಾಯಕ ಸದಾನಂದಗೌಡ ಅವರು ತನ್ನ ನಿಲುವನ್ನು ಕೆಲವೇ ದಿನಗಳಲ್ಲಿ ತಿಳಿಸಲಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ ಸೇರಿದಂತೆ ಕನಿಷ್ಠ ೨೦ ಸ್ಥಾನಗಳಲ್ಲಿ ನಾವು(ಕಾಂಗ್ರೆಸ್) ಗೆಲ್ಲಲಿದ್ದೇವೆ. ಎ.೧ರಂದು ನಮ್ಮ ಅಭ್ಯರ್ಥಿ ಸ್ಟಾರ್ ಚಂದ್ರು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ೮ ತಿಂಗಳ ಅಭಿವೃದ್ಧಿ ಕೆಲಸಗಳು ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು), ಶಾಸಕರಾದ ಎ.ಬಿ.ರಮೇಶ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್ ಗಣಿಗ, ಕೆ.ಎಂ.ಉದಯ, ದಿನೇಶ್ ಗೂಳಿಗೌಡ, ಮರಿತಿಬ್ಬೇಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಎಚ್.ಬಿ.ರಾಮು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಇತರ ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!