ಮಂಡ್ಶ:ಮೇ ೧. ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಂಡ್ಯದ ಮಿಮ್ಸ್ ಆವರಣದಲ್ಲಿ ನಾನ್ ಕ್ಲಿನಿಕಲ್ ಕಾರ್ಮಿಕರೊಂದಿಗೆ ಶಾಸಕ ಗಣಿಗ ರವಿಕುಮಾರ್ ಕೇಕ್ ಕತ್ತರಿಸಿ ಕಾರ್ಮಿಕರ ದಿನಾಚರಣೆ ಆಚರಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಆಸ್ಪತ್ರೆ ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ವಿಶ್ವ ಕಾರ್ಮಿಕರ ದಿನಾಚರಣೆಯನ್ನು
ಉದ್ದೇಶಿಸಿ
ಈ ಸಂದರ್ಭದಲ್ಲಿ ಮಾತನಾಡಿದ ಅವರು,ನಮ್ಮ ಸರ್ಕಾರ ಎಂದಿಗೂ ಕಾರ್ಮಿಕರ ಪರವಾಗಿದೆ.ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗಿದೆ.ನಮ್ಮ ಪಕ್ಷ ಚುನಾವಣೆಯ ಸಂದರ್ಭದಲ್ಲಿ ಪೌರಕಾರ್ಮಿಕರನ್ನು ಖಾಯಂ ಮಾಡುವುದಾಗಿ ಮಾತು ಕೊಟ್ಟಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12,600 ಪೌರಕಾರ್ಮಿಕರನ್ನು ಖಾಯಂ ಆಗಿ ನೇಮಕ ಮಾಡಿ ಇಂದು ಆದೇಶ ಮಾಡಿದ್ದಾರೆ. ಹಾಗೆಯೇ ನಗರ ಸ್ಥಳೀಯ ಸಂಸ್ಥೆಗಳ ಕಸದ ವಾಹನ ಚಾಲಕರು ನೀರು ಸರಬರಾಜು ಸಹಾಯಕರು ಸೇರಿದಂತೆ ಹೊರಗುತ್ತಿಗೆ ಕಾರ್ಮಿರನ್ನು ಹಂತ ಹಂತವಾಗಿ ನೇರ ಪಾವತಿಯಡಿ ತರಲಿದ್ದಾರೆ ಎಂದರು.ನಮ್ಮ ಸರ್ಕಾರ ಎಲ್ಲಾ ರೀತಿಯ ಕಾರ್ಮಿಕರ ರಕ್ಷಣೆಗೆ ಬದ್ಧವಾಗಿದೆ.ಕಾರ್ಮಿಕರಿಗೆ ವೇತನ,ವಸತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಿದೆ ಎಂದರು.
ಹೊರಗುತ್ತಿಗೆ ನೌಕರರ ಸಂಘದ ಸಂಚಾಲಕಿ ವೆಂಕಟಲಕ್ಷ್ಮೀ ಹೊರಗುತ್ತಿಗೆ ನೌಕರರಿಗೆ ಶಾಶ್ವತವಾದ ಸೂರಿನ ವ್ಯವಸ್ಥೆ ಮಾಡುವಂತೆ ಶಾಸಕರನ್ನು ಆಗ್ರಹಿಸಿದರು.ಈ ಕುರಿತು ಅಗತ್ಯ ಯೋಜನೆ ಸಿದ್ದಪಡಿಸುತ್ತಿರುವುದಾಗಿ ಶಾಸಕರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಹಿರಿಯ ನಾನ್ ಕ್ಲಿನಿಕಲ್ ಕಾರ್ಮಿಕರನ್ನು ಗೌರವದಿಂದ ಸನ್ಮಾನಿಸಲಾಯಿತು.
- ಈ ಸಂದರ್ಭದಲ್ಲಿ ನಾನ್ ಕ್ಲಿನಿಕಲ್ ಕಾರ್ಮಿಕರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ.ವೆಂಕಟಲಕ್ಷ್ಮೀ.ಚಿನ್ನರಾಜೂ ಕರುನಾಡ ಸೇವಕರು ಸಂಘದ ಜಿಲ್ಲಾಧ್ಯಕ್ಷ ಎಂಎನ್ ಚಂದ್ರು.ಕಾಂಗ್ರೆಸ್ ಮುಖಂಡರಾದ ಹಾಲಹಳ್ಳಿ ಅಶೋಕ್, ಯೋಗೇಶ್,ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಸಂದೇಶ್, ಸೇರಿದಂತೆ ನೂರಾರು ನಾನ್ ಕ್ಲಿನಿಕಲ್ ಕಾರ್ಮಿಕರು ಉಪಸ್ಥಿತರಿದ್ದರು.