ಫೋರ್ಜರಿ: ಇಬ್ಬರ ಅಮಾನತು
ಮಂಡ್ಯ: ಮುಖ್ಯಮಂತ್ರಿ ಸೇರಿದಂತೆ ಉನ್ನತ ಅಧಿಕಾರಿಗಳ ಸಹಿಯನ್ನು ಫೋರ್ಜರಿ ಮಾಡಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವಜನರನ್ನು ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾನ್ಸ್ಟೆಬಲ್ಗಳಾದ ಗ್ರಾಮಾಂತರ ಠಾಣೆಯ ಚಿಕ್ಕಯ್ಯ ಹಾಗೂ ಸೆಂಟ್ರಲ್ ಠಾಣೆಯ ಲೋಕೇಶ್ ಅವರನ್ನು ಅಮಾನತುಗೊಳಿಸಲಾಗಿದೆ
ಕೆಲಸಕೊಡಿಸುವುದಾಗಿನಿರುದ್ಯೋಗಿ
ಗಳನ್ನು ನಂಬಿಸಿ, ಲಕ್ಷಾಂತರ ರೂಪಾಯಿ ಪಡೆದು ವಂಚಿಸಿ ಜೈಲು ಸೇರಿರುವ ಆರೋಪಿ ವೆಂಕಟೇಶ್ ಎಂಬಾತನಿಗ ಇಬ್ಬರೂ ಸಹಕರಿಸಿದ್ದರು ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.