Wednesday, September 17, 2025
spot_img

ಮದ್ದೂರು ಗಲಭೆ:ಮ ೭ ಆರೋಪಿಗಳ ಬಂಧನ

ಮದ್ದೂರು ಗಲಭೆ: 7 ಆರೋಪಿಗಳು ವಶಕ್ಕೆ

ಮಂಡ್ಯ: ಸೆ.೧೩.ಮದ್ದೂರು ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿ ನ್ಯಾಯಾಂಗ ವಶದಲ್ಲಿದ್ದ 22 ಆರೋಪಿಗಳಲ್ಲಿ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಸೆ.7ರ ರಾತ್ರಿ ಗಣೇಶನ ಮೂರ್ತಿಯ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ್ದ 29 ಆರೋಪಿಗಳಲ್ಲಿ 22 ಮಂದಿಯನ್ನು ಪೊಲೀಸರು ಅದೇ ದಿನ ರಾತ್ರಿ ಬಂಧಿಸಿ, ಮರು ದಿನವೇ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.

ವಿಡಿಯೊ, ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿದ ಆರೋಪಿಗಳ ಗುರುತು ಪತ್ತೆ ಮಾಡಿ ಬಂಧಿಸಲಾಗಿತ್ತು. ಇದೀಗ ಪ್ರಕರಣದ ಸಮಗ್ರ ವಿಚಾರಣೆಗಾಗಿ ಆರೋಪಿಗಳ ಪೈಕಿ 7 ಮಂದಿಯನ್ನು ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಈಗ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಕೃತ್ಯದ ಹಿಂದಿನ ಕಾರಣ ತಿಳಿಯಲು ಮುಂದಾಗಿದ್ದಾರೆ. ಜತೆಗೆ ಸಾಕ್ಷಿ ಸಂಗ್ರಹ ಕಾರ್ಯವೂ ನಡೆದಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!