Saturday, February 21, 2026
spot_img

ಲಂಚ ಪಡೆಯುವಾಗಲೆ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಶಾಸಕ ಚಂದ್ರು ಲಮಾಣಿ

5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ

ಗದಗ: ರಸ್ತೆ ಕಾಮಗಾರಿ ಸಂಬಂಧಿಸಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (BJP MLA Dr. Chandru Lamani ) ಅವರು ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್​​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರ ಒಡೆತನದ ಬಾಲಾಜಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.

ಗುತ್ತಿಗೆದಾರ ‌ವಿಜಯ ಪೂಜಾರ ಎಂಬುವರಿಂದ 5 ಲಕ್ಷ ಹಣ ಪಡೆಯುವ ವೇಳೆ ಧಾರವಾಡ ಲೋಕಾಯುಕ್ತ ಎಸ್​ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ತಂಡ ದಾಳಿ ನಡೆಸಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಂಕಧಾಳ ಗ್ರಾಮದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಮಂಜೂರಾಗಿದೆ. ಇದಕ್ಕಾಗಿ ಗುತ್ತಿಗೆದಾರ ‌ವಿಜಯ ಪೂಜಾರ ಎಂಬುವರ ಬಳಿ ಗುತ್ತಿಗೆಗೆ ಶಾಸಕ 11 ಲಕ್ಷ ಡೀಲ್​ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇಂದು ಗುತ್ತಿಗೆದಾರ ವಿಜಯ ಪೂಜಾರ 5 ಲಕ್ಷ ಹಣ ಶಾಸಕರಿಗೆ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಶಾಸಕ ಚಂದ್ರ ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಶಾಸಕರ ಖಾಸಗಿ ಪಿಎ ಗುರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!