ಜೂನ್ 30 ರಿಂದ ಕಬ್ಬು ಅರೆಯುವ ಕಾರ್ಯ ಪ್ರಾರಂಭ: ಪಾಟೀಲ್ ಅಪ್ಪ ಸಾಹೇಬ್
ಜಿಲ್ಲೆಯ ರೈತರ ಆರ್ಥಿಕ ಜೀವನಾಡಿ ಮೈಶುಗರ್ ಕಾರ್ಖಾನೆಯು 2023-24 ನೇ ಸಾಲಿನ ಕಬ್ಬು ಅರೆಯುವ ಕಾರ್ಯವನ್ನು ಜೂನ್ 30 ರಂದು ಪ್ರಾರಂಭಿಸಲಾಗುವುದು ಎಂದು ಮೈಶುಗರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಪಾಟೀಲ್ ಅಪ್ಪ ಸಾಹೇಬ್ ತಿಳಿಸಿದ್ದಾರೆ.
ಅವರು ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮೈಶುಗರ್ ಕಾರ್ಖಾನೆಯ ಯಂತ್ರಗಳ ದುರಸ್ತಿ ಕಾರ್ಯವು ಪೂರ್ಣಗೊಂಡಿದ್ದು, ನಿರಂತರ ಕಬ್ಬು ಅರೆಯುವಿಕೆಗೆ ಸಜ್ಜಾಗಿದೆ ಎಂದರು.
ಕಬ್ಬು ಕಟಾವು ಹಾಗೂ ಕಾರ್ಮಿಕರ ವ್ಯವಸ್ಥೆಯನ್ನೂ ಕೂಡ ಕಂಪನಿಯ ವತಿಯಿಂದ ವ್ಯವಸ್ಥೆ ಮಾಡಲಾಗುವುದು. ರೈತರು ಕಬ್ಬು ಕಟಾವು ಮಾಡಿದ ತಾಜಾ ಕಬ್ಬನ್ನು 24 ಗಂಟೆಯೊಳಗೆ ನುರಿಸಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಕಬ್ಬು ಸರಬರಾಜು ಮಾಡಿದ ರೈತರುಗಳಿಗೆ 14 ದಿನಗಳಿಗೊಮ್ಮೆ ಕಬ್ಬಿನ ಬಿಲ್ಲನ್ನು ಪಾವತಿಸಲಾಗುವುದು. ರೈತರುಗಳು ಕಂಪನಿಯ ಏಳಿಗೆಗಾಗಿ ತಾವು ಬೆಳೆದ ಗುಣಮಟ್ಟದ ಕಬ್ಬನ್ನು ಖಾಸಗಿ ಕಾರ್ಖಾನೆಗಳಿಗೆ ಪರಭಾರೆ ಮಾಡದೆ ಮೈಸೂರು ಸಕ್ಕರೆ ಕಾರ್ಖಾನೆಗೆ ಸರಬರಾಜು ಮಾಡಬೇಕೆಂದು ಮನವಿ ಮಾಡಿದರು.
50 ಕೋಟಿ ಹಣ ಜಮೆ ಸರ್ಕಾರದದಿಂದ ಕಾರ್ಖಾನೆಯ ಖಾತೆಗೆ 50 ಕೋಟಿ ಹಣ ಜಮೆ ಆಗಿದೆ. ಸದ್ಯಕ್ಕೆ ಹಣದ ಕೊರತೆ ಇಲ್ಲ. ಕಬ್ಬು ಸರಬರಾಜು ಮಾಡಿದ ರೈತರಿಗೆ 14 ದಿನಗಳಿಗೊಮ್ಮೆ ಹಣ ಬಿಡುಗಡೆ ಮಾಡಲಾಗುವುದು. ಕಾರ್ಖಾನೆಯಲ್ಲಿ 18 ಸಾವಿರ ಕ್ವಿಂಟಲ್ ಸಕ್ಕರೆ ಇದೆ ಅದನ್ನ ಮಾರಾಟ ಮಾಡಿ ಹಣಕಾಸಿನ ಪರಿಸ್ಥಿತಿಯನ್ನು ಸರಿದೂಗಿಸಲಾಗುವುದು.
3500 ಕಾರ್ಮಿಕರು 1000 ಸ್ಥಳೀಯರು ಕಾರ್ಮಿಕರು, ಬಳ್ಳಾರಿಯಿಂದ 1000, ಮಹಾರಾಷ್ಟ್ರ 500, ಬಿಜಾಪುರ 500, ಜಾರ್ಖಂಡ್ ನಿಂದ 500 ಕಾರ್ಮಿಕರು ಸೇರಿದಂತೆ ಒಟ್ಟು 3500 ಕಾರ್ಮಿಕರ ಕೆಲಸ ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಇವಾಗ 300 ಕಾರ್ಮಿಕರು ಕೆಲಸ ನಿರ್ವಹಿಸಿಸುತ್ತಿದ್ದಾರೆ ಎಂದರು.
