Saturday, July 27, 2024
spot_img

ಲಂಚ ಆರೋಪ ದೂರು:ತನಿಖೆಗೆ ಕೃಷಿ ಸಚಿವರ ಒತ್ತಾಯ

ಲಂಚ ಆರೋಪ ದೂರು: ತನಿಖೆಗೆ ಕೃಷಿ ಸಚಿವರ ಒತ್ತಾಯ

ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿಯವರ ಮೂಲಕ ತನಿಖೆ ಮಾಡಿ ವರದಿ‌ ಪಡೆಯುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಹಣಕ್ಕೆ ಒತ್ತಾಯಿಸಲಾಗಿದೆ ಎಂದು ಮಂಡ್ಯ ಜಿಲ್ಲೆಯ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ ಎಂದು
ಕೆಲ ಮಾಧ್ಯಮದಲ್ಲಿ ಸುದ್ದಿ ಪ್ರಸಾರ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವರು ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗ ಪಡಿಸುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಅಧಿಕಾರಿಗಳು ನೀಡಿರುವ ದೂರು ಎಂದು ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ.
ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ
ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು ,ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ.
ನಮ್ಮ ಸರ್ಕಾರದ ಜನಪರ ಆಡಳಿತದ ಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದು ಇದು ಹತಾಶೆ ಮನೋಭಾವವಾಗಿದೆ.
ಈಗಾಗಲೇ ಈ‌ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ .

ನಕಲಿ ದೂರುಪತ್ರ ಸೃಷ್ಟಿ ಉದ್ದೇಶ ಪೂರ್ವಕವಾಗಿ ಕೆಟ್ಟ ಹೆಸರು ತರುಲು ಮಾಡುತ್ತಿರು ಮುಂದುವರೆದ ಪ್ರಯತ್ನ .
ಹಾಗಾಗಿಯೇ ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿಯವರ ಮೂಲಕ ತನಿಖೆ ಮಾಡಿ ವರದಿ‌ ಪಡೆಯುವಂತೆ ಮುಖ್ಯಮಂತ್ರಿಗಳನ್ನು ಚಲುವರಾಯಸ್ವಾಮಿ ಯವರು ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!