Tuesday, September 16, 2025
spot_img

ಕಾವೇರಿ ಆರತಿ ತಡೆಯಲಾಗದು:ಡಿ.ಕೆ ಶಿವಕುಮಾರ್ ಸವಾಲ್

ಮಳವಳ್ಳಿ (ಮಂಡ್ಯ ಜಿಲ್ಲೆ): ‘ಕೆಆರ್‌ಎಸ್‌ ಜಲಾಶಯದ ಬಳಿ ಕಾವೇರಿ ಆರತಿ ಕಾರ್ಯಕ್ರಮವನ್ನು ನಿಲ್ಲಿಸಲಾಗದು’ ಎಂದು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ತಾಲ್ಲೂಕಿನ ಶಿವನಸಮುದ್ರ ಬಳಿ ಭಾನುವಾರ ‘ಗಗನಚುಕ್ಕಿ ಜಲಪಾತೋತ್ಸವ’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸಿ ರೈತ ಸಂಘದ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆದರೆ ಪ್ರಕೃತಿ ಮಾತೆಗೆ ಪೂಜೆ, ಆರತಿ ಮಾಡುವುದನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ’ ಎಂದರು.

‘ಎರಡು ವರ್ಷಗಳಲ್ಲೇ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ₹ 2ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಇದುವರೆಗೆ ₹ 1,970 ಕೋಟಿ ಮೊತ್ತದ ಕಾಮಗಾರಿ ಮಂಜೂರಾಗಿವೆ. ಇದು ಸುಳ್ಳಾದರೆ ವಿರೋಧ ಪಕ್ಷದವರು ಬಂದು ಪರಿಶೀಲಿಸಲಿ’ ಎಂದು ಸವಾಲೆಸೆದರು.

‘ಮಂಡ್ಯ, ಬೆಂಗಳೂರು ದಕ್ಷಿಣ ಜಿಲ್ಲೆಗಳು ನನ್ನ ಕಣ್ಣುಗಳಿದ್ದಂತೆ. ರೈತರ ಬದುಕು ಸುಧಾರಣೆಗೆ ಹಾಗೂ ಅಭಿವೃದ್ಧಿಗೆ ಎಲ್ಲ ರೀತಿಯ ಕಾಯಕ್ರಮ ರೂಪಿಸಲು ಸರ್ಕಾರ ಬದ್ಧ’ ಎಂದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!