ಅವಧಿ ಪೂರ್ಣಗೊಳಿಸಿದ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಎರಡನೇ ಅವಧಿಗೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ
ಅವಧಿ ಪೂರ್ಣಗೊಳಿಸಿದ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಎರಡನೇ ಅವಧಿಗೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ
ಸರ್ಕಾರದ ಪರ ವಾದಿಸಿದ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು “ಕ್ಷೇತ್ರ ಪುನರ್ ವಿಂಗಡಣೆಗೆ 150 ದಿನ ಬೇಕಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಸಂವಿಧಾನದ 243(ಯು) ವಿಧಿಯಂತೆ ಸದಸ್ಯರ ಅವಧಿ 5 ವರ್ಷ ನಿಗದಿಯಾಗಿದೆ. ಅವಧಿ ಮುಗಿದ ಮೇಲೆ ಹಾಲಿ ಸದಸ್ಯ, ಅಧ್ಯಕ್ಷರನ್ನು ಮುಂದುವರಿಸಲಾಗದು. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಲಾಗಿದೆ” ಎಂದರು.
2025ರ ಅಕ್ಟೋಬರ್ 18ರಿಂದ ನವೆಂಬರ್ 6ರವರೆಗೆ ಐದು ವರ್ಷದ ಅಧಿಕಾರಾವಧಿ ಮುಕ್ತಾಯಗೊಂಡಿರುವ 42 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯಿತಿಗಳು ಸೇರಿ ರಾಜ್ಯದ ಒಟ್ಟು 118 ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ನವೆಂಬರ್ 5ರಂದು ಆದೇಶ ಹೊರಡಿಸಿತ್ತು. ಅದನ್ನು ಅರ್ಜಿದಾರರು ಪ್ರಶ್ನಿಸಿದ್ದರು.
ಸಂವಿಧಾನದ ೨೪೩ ನೇ ವಿಧಿ ಯಾವುದೆ ಸ್ಥಳೀಯ ಸಂಸ್ಥೆಯ ಮೊದಲ ಸಭೆಯ ಆರಂಭದ ದಿನದಿಂದ ಐದು ವರ್ಷಕ್ಕೆ ಅದರ ಅವಧಿ ಮುಕ್ತಾಯವಾಗತಕ್ಕದ್ದು ಎಂದು ಹೇಳುತ್ತದೆ.ಕರ್ನಾಟಕ ಮುನಿಸಿಪಲ್ ಕಾಯ್ದೆ ಸಹ ಇದನ್ನೆ ಹೇಳುತ್ತದೆ.ಆದಾಗಿಯು ಅಧಿಕಾರದ ಬೆನ್ನೇರಿದ್ದ ನಗರಸಭಾ ಸದಸ್ಯರು ಹೈಕೋರ್ಟ್ ಬಾಗಿಲು ತಟ್ಟಿದ್ದರು.ಮಂಡ್ಯ ನಗರಸಭೆಯ ಸದಸ್ಯರು ಸಹ ಪಕ್ಷಾತೀತವಾಗಿ ಹೈಕೋರ್ಟ್ ಕದ ತಟ್ಟಿದ್ದು ಹೈಕೋರ್ಟ್ ಆದೇಶದಿಂದ ಅಧಿಕಾರ ವಿಸ್ತರಣೆಯ ಕನಸು ಭಗ್ನವಾದಂತಾಗಿದೆ.


